ನಟ ದರ್ಶನ್‌ಗೆ ಆಪರೇಷನ್: ಇಂದೂ ಸಿಗಲಿಲ್ಲ ಜಾಮೀನು

ನಟ ದರ್ಶನ್‌ಗೆ ಆಪರೇಷನ್: ಇಂದೂ ಸಿಗಲಿಲ್ಲ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ ಸಲಹೆ ಮೇರೆಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ.

ಮಂಗಳವಾರ ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ಅವರ ಪರ ವಕೀಲರು ಕೋರ್ಟ್‌ಗೆ ವಿವರಣೆ ನೀಡಿದ್ದಾರೆ. ದರ್ಶನ್‌ಗೆ ತೀವ್ರವಾಗಿ ಬೆನ್ನು ನೋವು ಕಾಡುತ್ತಿದೆ. ಅವರಿಗೆ ಸೋಮವಾರ ವಿಮ್ಸ್‌ನಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. ವೈದ್ಯರು ಆಪರೇಷನ್ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಜಾಮೀನು ನೀಡಿ ಎಂದು ದರ್ಶನ್ ಪರ ವಕೀಲ ಸಿ.ವ ನಾಗೇಶ್ ಕೋರ್ಟ್‌‌ಗೆ ಮನವಿ‌ ಮಾಡಿದರು.

ನ್ಯಾಯಾಧೀಶರು ಅವರ ವೈದ್ಯಕೀಯ ವರದಿ ನೀಡುವಂತೆ ಸೂಚಿಸಿದ್ದಾರೆ. ವೈದ್ಯಕೀಯ ವರದಿ ಮತ್ತು ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅಕ್ಟೋಬರ್ 28ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

Ads on article

Advertise in articles 1

advertising articles 2

Advertise under the article