ಪ್ರಯಾಗರಾಜ್ :ಮಹಾಕುಂಭಮೇಳಕ್ಕೆ ತೆರಳುತ್ತಿರುವ ವೇಳೆ ಭೀಕರ ರಸ್ತೆ ಅಪಘಾತ ;ಸ್ಥಳದಲ್ಲೇ 10ಜನ ಸಾವು.

ಪ್ರಯಾಗರಾಜ್ :ಮಹಾಕುಂಭಮೇಳಕ್ಕೆ ತೆರಳುತ್ತಿರುವ ವೇಳೆ ಭೀಕರ ರಸ್ತೆ ಅಪಘಾತ ;ಸ್ಥಳದಲ್ಲೇ 10ಜನ ಸಾವು.

ಪ್ರಯಾಗ್ ರಾಜ್: ಬೊಲೆರೋ  ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನಪ್ಪದ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.


ಛತ್ತೀಸಗಢದಿಂದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
 ಮೃತರನ್ನು ಛತ್ತೀಸಗಢದ ಕೊರ್ಬಾ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ 19 ಮಂದಿಯನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article