ಬನ್ನೇರುಘಟ್ಟ :ಈಜಲು ಬಾರದೆ ಸ್ನೇಹಿತರ ಕಣ್ಣೆದುರೇ ಸುವರ್ಣಮುಖಿ ಕಲ್ಯಾಣಿಯಲ್ಲಿ  ಮುಳುಗಿ ಸಾವು. ಬೊಮ್ಮಸಂದ್ರದ ಎಸ್ ಎಫ್ ಎಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ  ದುರ್ದೈವಿಗಳು

ಬನ್ನೇರುಘಟ್ಟ :ಈಜಲು ಬಾರದೆ ಸ್ನೇಹಿತರ ಕಣ್ಣೆದುರೇ ಸುವರ್ಣಮುಖಿ ಕಲ್ಯಾಣಿಯಲ್ಲಿ ಮುಳುಗಿ ಸಾವು. ಬೊಮ್ಮಸಂದ್ರದ ಎಸ್ ಎಫ್ ಎಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ದುರ್ದೈವಿಗಳು

ಆನೇಕಲ್​: ಈಜಲು ಹೋದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಈ ವೇಳೆ ಸ್ನೇಹಿತರೂ ಪಕ್ಕದಲ್ಲೇ ಇದ್ದರೂ ಕೂಡ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ.

ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂದ್ರದ ಎಸ್​ಎಫ್​ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿಗೆ ತೆರಳಿದ್ದಾರೆ. ಬಳಿಕ ಕಲ್ಯಾಣಿಗೆ ಈಜಲು ಇಳಿದಿದ್ದಾರೆ. ಈ ಪೈಕಿ ದೀಪು, ಯೋಗೇಶ್ವರ್​ಗೆ ಈಜಲು ಆಗದೆ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ್ದಾರೆ. ಇತ್ತ ರಕ್ಷಣೆ ಮಾಡಲು ಸಾಧ್ಯವಾಗದೆ ಉಳಿದ ಸ್ನೇಹಿತರು ಕಂಗಾಲಾಗಿದ್ದಾರೆ.

ಈಜಲು ಬಾರದೆ ಒಬ್ಬರಾದ ಮೇಲೆ ಒಬ್ಬರಂತೆ ಇಬ್ಬರು ಸ್ನೇಹಿತರು ಇನ್ನುಳಿದ ಸ್ನೇಹಿತರ ಕಣ್ಣೆದುರೇ ಮುಳುಗಿ ಪ್ರಾಣಬಿಟ್ಟಿದ್ದಾರೆ. ಘಟನೆಯ ಸಂಪೂರ್ಣ ವಿಡಿಯೋ ಅಲ್ಲಿದ್ದ ಯುವಕನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ

Ads on article

Advertise in articles 1

advertising articles 2

Advertise under the article