ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣ ; ಬೇಕಲ ಬೀಚಿನ ಇಬ್ಬರು ಕಾರ್ಮಿಕರನ್ನು ಬಂಧಿಸಿದ ಪೊಲೀಸರು.

ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣ ; ಬೇಕಲ ಬೀಚಿನ ಇಬ್ಬರು ಕಾರ್ಮಿಕರನ್ನು ಬಂಧಿಸಿದ ಪೊಲೀಸರು.


ಕಾಸರಗೋಡು : ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಮವ್ವಾರ್ ನ ಸುಂದರ (49) ಮತ್ತು ಮುರ್ಷಿದಾಬಾದ್ ನ ರೋಶನ್ ರಾಯ್ (19) ಬಂಧಿತ ಆರೋಪಿಗಳು. ಇಬ್ಬರು ಬೇಕಲ ಬೀಚ್ ನ ಕಾರ್ಮಿಕರಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ 2.45 ರ ಸುಮಾರಿಗೆ ಮಂಗಳೂರು ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಬೇಕಲ ಸಮೀಪ ಕಲ್ಲೆಸೆದಿದ್ದು, ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article