ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣ ; ಬೇಕಲ ಬೀಚಿನ ಇಬ್ಬರು ಕಾರ್ಮಿಕರನ್ನು ಬಂಧಿಸಿದ ಪೊಲೀಸರು.
Wednesday, February 5, 2025
ಕಾಸರಗೋಡು ಮವ್ವಾರ್ ನ ಸುಂದರ (49) ಮತ್ತು ಮುರ್ಷಿದಾಬಾದ್ ನ ರೋಶನ್ ರಾಯ್ (19) ಬಂಧಿತ ಆರೋಪಿಗಳು. ಇಬ್ಬರು ಬೇಕಲ ಬೀಚ್ ನ ಕಾರ್ಮಿಕರಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ 2.45 ರ ಸುಮಾರಿಗೆ ಮಂಗಳೂರು ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಬೇಕಲ ಸಮೀಪ ಕಲ್ಲೆಸೆದಿದ್ದು, ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.