ಮಂಗಳೂರು :ಬಜಪೆಯಲ್ಲಿ ಅಕ್ರಮವಾಗಿ ಗೋಸಾಗಾಟ  ಮಾಡುತ್ತಿದ್ದನ್ನು ಖಚಿತ ಮಾಹಿತಿ ಪಡೆದು ತಡೆದ ಬಜರಂಗದಳದ ಕಾರ್ಯಕರ್ತರು.

ಮಂಗಳೂರು :ಬಜಪೆಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದನ್ನು ಖಚಿತ ಮಾಹಿತಿ ಪಡೆದು ತಡೆದ ಬಜರಂಗದಳದ ಕಾರ್ಯಕರ್ತರು.

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಚಾಲಕ ಘಟನೆ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article