ಚಿತ್ರದುರ್ಗ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಧಾರುಣ ಸಾವು.
Wednesday, April 2, 2025
ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವನ್ನಪ್ಪಿರುವ ಧಾರುಣ ಘಟನೆಯೊಂದುಚಿತ್ರದುರ್ಗ ತಾಲ್ಲೂಕಿನ ಹುಲ್ಲೂರು ಸಿಂಗಾಪುರದಲ್ಲಿ ನಡೆದಿದೆ.
ಕೃಷಿ ಹೊಂಡಕ್ಕೆ ಬಿದ್ದಂತ ಮಗನನ್ನು ರಕ್ಷಣೆ ಮಾಡಲು ಹೋಗಿ ತಂದೆಯೂ ಸಾವನ್ನಪ್ಪಿದ್ದಾರೆ. ಈಜಾಡಲು ಹೋಗಿ ನೀರಲ್ಲಿ ಮುಳುಗಿ ತಂದೆ ಬಸವರಾಜ (50) ಹಾಗೂ ಪುತ್ರ ಆಕಾಶ್ (15) ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.