ಜಮ್ಮು-ಕಾಶ್ಮೀರ :ಪಹಲ್ಗಾಮ್ ದಾಳಿ ಪ್ರಕರಣ ;ಇಬ್ಬರು ಭಯೋತ್ಪಾದಕರ ನಿವಾಸ ಧ್ವಂಸಗೊಳಿಸಿದ ಭಾರತೀಯ ಸೇನೆ.
Thursday, April 24, 2025

ಶ್ರೀನಗರ: ಪಹಲ್ಗಾಮ್ ದಾಳಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ನಿವಾಸವನ್ನು ಸಂಪೂರ್ಣ ದ್ವಂಸ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ.
ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು.
ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ ತೆರಳಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.