ಧಾರವಾಡ :ರಾಜ್ಯಾದ್ಯಂತ ಅಬ್ಬರಿಸಿದ ಮಳೆ:ಧಾರವಾಡದಲ್ಲಿ ಸಿಡಿಲು ಬಡಿದು ಯುವಕ ಸಾವು.
Tuesday, May 20, 2025

ಧಾರವಾಡ : ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ..
ಹಿರೇ ಹರಕುಣಿ ಗ್ರಾಮದ ಮೈಲಾರಪ್ಪ ಕೊಣಕಲ್ (20) ಮೃತ ಯುವಕ ಎಂದು ತಿಳಿದುಬಂದಿದೆ. ಜಾನುವಾರು ಮೈ ತೊಳೆಯಲು ತೆರಳಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಮೈಲಾರಪ್ಪ ಸ್ಥಳದಲ್ಲಿ ಸಾವಣಪ್ಪಿದ್ದಾನೆ.ಘಟನೆ ಕುರಿತಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.