
ಚಿಕ್ಕ ಮಗಳೂರು: ಭಾರೀ ಗಾಳಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬೃಹತ್ ಮರ.!
Monday, June 2, 2025

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ್ದು ,ಇದರಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸುಮಾರು 3 ಕಿಮೀ ವಾಹನಗಳು ಸಾಲುಗಟ್ಟಿ ನಿಂತಿದ್ದವು
ಒಂದು ಗಂಟೆ ಬಳಿಕ ಜೆಸಿಬಿ ಮೂಲಕ ಮರ ತೆರವು ಮಾಡಲಾಯಿತು. ಬಳಿಕ ವಾಹನ ಸಂಚಾರ ಆರಂಭವಾಯಿತು. ಘಾಟಿಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಬಣಕಲ್ ಪೊಲೀಸರು ಹಾಗೂ ಸ್ಥಳೀಯರ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.