
ಬೆಂಗಳೂರು: RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ.
Tuesday, June 3, 2025

ಬೆಂಗಳೂರು: ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಪಂಜಾಬ್ ವಿರುದ್ಧ 6 ರನ್ ಗಳ ಗೆಲುವು ಸಾಧಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ.
ಇನ್ನು ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ.
ಪ್ರತಿರೋಧ ತೋರುತ್ತಿದ್ದಂತೆ ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.