ಬೆಂಗಳೂರು :ಆರ್ ಸಿ ಬಿ ಗೆಲುವಿನ ಸಂಭ್ರಮಾಚಾರಣೆ ಕಾರ್ಯಕ್ರಮ ದಲ್ಲಿ ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು.

ಬೆಂಗಳೂರು :ಆರ್ ಸಿ ಬಿ ಗೆಲುವಿನ ಸಂಭ್ರಮಾಚಾರಣೆ ಕಾರ್ಯಕ್ರಮ ದಲ್ಲಿ ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ತಮ್ಮ ಮೊದಲ ಐಪಿಎಲ್ ಟ್ರೋಫಿ ಗೆದ್ದಿದೆ.ಆರ್ಸಿಬಿ ಮ್ಯಾನೇಜ್ಮೆಂಟ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು.

ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಇದರಿಂದ 11 ಮಂದಿಯ ಜೀವ ಹೋಗಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ಕೊನೆಗೂ . ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಪೊಲೀಸ್ ಇಲಾಖೆ ಕಾಲ್ತುಳಿತ ಪ್ರಕರಣದ ಯುಡಿಆರ್ ಬದಲು ಎಫ್‌ಐಆರ್ ದಾಖಲಿಸಿಕೊಂಡಿದೆ. RCB ಫ್ರ್ಯಾಂಚೈಸಿ, KSCA ಹಾಗೂ ಡಿಎನ್‌ಎ ಮ್ಯಾನೇಜ್‌ಮೆಂಟ್ ವಿರುದ್ಧ FIR ದಾಖಲಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, BNS ಕಾಯ್ದೆ 106 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ನೆಗ್ಲಿಜೆನ್ಸ್ ಅಡಿಯಲ್ಲಿ ಕೂಡ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದಾರೆ. ಇಂದು ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Ads on article

Advertise in articles 1

advertising articles 2

Advertise under the article