ಬೆಂಗಳೂರು:ರಸ್ತೆಯಲ್ಲೇ ಹೊತ್ತಿ ಉರಿದ ಕಾರು;ಚಾಲಕ ಅಗ್ನಿ ದುರಂತದಿಂದ ಪಾರು..!

ಬೆಂಗಳೂರು:ರಸ್ತೆಯಲ್ಲೇ ಹೊತ್ತಿ ಉರಿದ ಕಾರು;ಚಾಲಕ ಅಗ್ನಿ ದುರಂತದಿಂದ ಪಾರು..!

ಬೆಂಗಳೂರು: ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಾನಿಕ್‌ ಸಿಟಿ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್‌ ಕಾರಿನಲ್ಲಿದ್ದ ಚಾಲಕ ದುರಂತದಿಂದ ಪಾರಾಗಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಬೊಮ್ಮನಹಳ್ಳಿಯ ಸಮೀಪದ ರೂಪೇನ ಅಗ್ರಹಾರ ಬಳಿಯ ರಸ್ತೆಯಲ್ಲಿ ಹೊರಟಿದ್ದ ಎಸ್‌ಯುವಿ ಕಾರು ಒಮ್ಮೆಗೇ ನಿಂತಿತು.

ತಾಂತ್ರಿಕ ಸಮಸ್ಯೆ ಇರಬಹುದು ಎಂದು ಚಾಲಕ ಕಾರನ್ನು ಮತ್ತೆ ಸ್ಟಾರ್ಟ್ ಮಾಡಲು ಮುಂದಾದಾಗ ದಿಢೀರ್‌ ಬೆಂಕಿ ಕಾಣಿಸಿಕೊಂಡಿತು.

ತಕ್ಷಣ ಚಾಲಕ ಕಾರಿನಿಂದ ಹೊರಗಡೆ ಬಂದು ಜೀವ ಉಳಿಸಿಕೊಂಡಿದ್ದಾರೆ.

ಅಲ್ಲೇ ಇದ್ದ ಸಂಚಾರಿ ಪೊಲೀಸರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಬಂದ ಅಗ್ನಿಶಾಮಕ ದಳ ಸುಮಾರು ಅರ್ಧ ಗಂಟೆಯವರೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

Ads on article

Advertise in articles 1

advertising articles 2

Advertise under the article