ಪುತ್ತೂರು :ಕೃಷ್ಣ ರಾವ್ ಪ್ರಕರಣದಲ್ಲಿ ಜಿಲ್ಲೆಯ ನೀಚ ರಾಜಕಾರಣಿಗಳು ತುಟಿ ಬಿಚ್ಚುತ್ತಿಲ್ಲ…ನಮ್ಮ ಜಿಲ್ಲೆಯಲ್ಲಿ ಯಾರು ಗಂಡಸರು ಇಲ್ಲವಾ??? ಪ್ರತಿಭಾ ಕುಳಾಯಿ.
ಬೆಂಗಳೂರಿನಿಂದ ನಂಜುಡಿಯವರು ಬಂದು ಈ ಪ್ರಕರಣದಲ್ಲಿ ಹೋರಾಟ ಮಾಡುತ್ತಿದ್ದಾರೆ. ಯಾಕೆ ನಮ್ಮ ಜಿಲ್ಲೆಯಲ್ಲಿ ಯಾರು ಗಂಡಸರು ಇಲ್ಲವಾ, ಹಿಂದೂ ಹೆಣ್ಣುಮಗಳು ಅಂದರೆ ಅಷ್ಟು ಕೀಳಾ, ಡಿಎನ್ಎ ಟೆಸ್ಟ್ ಆಗಿ ಇಷ್ಟು ದಿನವಾದರೂ ಅವನಿಗೆ ಮದುವೆಗೆ ಒಪ್ಪಿಸಲಿಕ್ಕೆ ಇವರಿಗೆ ಆಗಿಲ್ಲ, ಅವರ ಸಮಾಜದಲ್ಲಿ ಯಾರೂ ಗಂಡಸರು ಇಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೀಗ ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.
ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು. ಜಿಲ್ಲೆಯಲ್ಲಿ ದನಕ್ಕೆ ಕೊಡುವ ಮರ್ಯಾದೆ ಒಂದು ಹೆಣ್ಣು ಮಗಳಿಗೆ ಇಲ್ಲ ಎಂದು ಕೋಪ ವ್ಯಕ್ತಪಡಿಸಿದರು.