ಉಡುಪಿ :ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳು ಜಲಸಮಾಧಿ.!

ಉಡುಪಿ :ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳು ಜಲಸಮಾಧಿ.!

ಉಡುಪಿ:  ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ ನಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಘಟನೆ ನಡೆದಿದೆ. ಸಂಕೇತ್(16), ಸೂರಜ್(15), ಆಶಿಶ್(14) ನೀರು ಪಾಲಾದ ಮಕ್ಕಳು. ಸದ್ಯ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ರೆ, ಮತ್ತಿಬ್ಬರು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಘಟನೆ ನಡೆದ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article