ಮಂಡ್ಯ :ಕಾವೇರಿ ನೀರಿನಲ್ಲಿ ಕೊಚ್ಚಿಹೋದ ಪ್ರವಾಸಕ್ಕೆ ಬಂದ ನಾಲ್ವರು  ಮಕ್ಕಳು. ಒಂದು ಮಗು ಸಾವು.! ಉಳಿದ ಮಕ್ಕಳಿಗಾಗಿ ಮುಂದುವರಿದ ಶೋಧ ಕಾರ್ಯ..!!

ಮಂಡ್ಯ :ಕಾವೇರಿ ನೀರಿನಲ್ಲಿ ಕೊಚ್ಚಿಹೋದ ಪ್ರವಾಸಕ್ಕೆ ಬಂದ ನಾಲ್ವರು ಮಕ್ಕಳು. ಒಂದು ಮಗು ಸಾವು.! ಉಳಿದ ಮಕ್ಕಳಿಗಾಗಿ ಮುಂದುವರಿದ ಶೋಧ ಕಾರ್ಯ..!!

ಮಂಡ್ಯ: ಪ್ರವಾಸಕ್ಕೆಂದು ಬಂದಿದ್ದ ಮಕ್ಕಳು ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಭೀಕರ ಘಟನೆ ಮಂಡ್ಯದಲ್ಲಿ ಸಂಭವಿಸಿದೆ.

ಕಾವೇರಿ ನದಿಯಲ್ಲಿ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದು, ಓರ್ವ ಬಾಲಕಿ ಮೃತಪಟ್ಟಿದ್ದಾಳೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ರಾಮಸ್ವಾಮಿ ನಾಲೆಯ ಬಳಿ ಘಟನೆ ಸಂಭವಿಸಿದೆ.

ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಬರಲಾಗಿತ್ತು. ಪ್ರವಾಸಕ್ಕೆ ಬಂದ ಮಕ್ಕಳು ನಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ 13 ವರ್ಷದ ಐಶಾ ಎನ್ನುವ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತಾದರೂ, ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆಗೆ ಸ್ಪಂದಿಸದೆ ಐಶಾ ಅಸುನೀಗಿದ್ದಾಳೆ.

ಇಂದು ಶೋಧ ಕಾರ್ಯ:

ಇನ್ನುಳಿದಂತೆ 14 ವರ್ಷದ ಹನಿ, 13 ವರ್ಷದ ಅರ್ಫಿನ್‌ ಹಾಗೂ 13 ವರ್ಷದ ತರ್ವಿನ್‌ ನಾಪತ್ತೆಯಾಗಿದ್ದಾರೆ. ಮಕ್ಕಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಆದರೆ, ಕತ್ತಲು ಆವರಿಸಿದ ಕಾರಣ ಶೋಧ ಕಾರ್ಯ ಸ್ಥಗಿತಗೊಂಡಿದೆ. ಭಾನುವಾರ ಬೆಳಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಲಿದ್ದಾರೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

Ads on article

Advertise in articles 1

advertising articles 2

Advertise under the article