ಕೊಪ್ಪಳ :ವಸತಿ ನಿಲಯದಲ್ಲೇ ಮಗುವಿಗೆ ಜನ್ಮವಿತ್ತ ಹತ್ತನೇ ಕ್ಲಾಸ್ ವಿದ್ಯಾರ್ಥಿನಿ! ಸಿಬಂದಿ ನಿರ್ಲಕ್ಷ್ಯ ಬಗ್ಗೆ ತೀವ್ರ ಆಕ್ರೋಶ, ಮಕ್ಕಳ ಆಯೋಗದಿಂದ ಜಿಲ್ಲಾಡಳಿತಕ್ಕೆ ತರಾಟೆ..!!

ಕೊಪ್ಪಳ :ವಸತಿ ನಿಲಯದಲ್ಲೇ ಮಗುವಿಗೆ ಜನ್ಮವಿತ್ತ ಹತ್ತನೇ ಕ್ಲಾಸ್ ವಿದ್ಯಾರ್ಥಿನಿ! ಸಿಬಂದಿ ನಿರ್ಲಕ್ಷ್ಯ ಬಗ್ಗೆ ತೀವ್ರ ಆಕ್ರೋಶ, ಮಕ್ಕಳ ಆಯೋಗದಿಂದ ಜಿಲ್ಲಾಡಳಿತಕ್ಕೆ ತರಾಟೆ..!!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 

ಬಾಲಕಿಯ ಹೆರಿಗೆ ವಸತಿ ನಿಲಯದ ಆವರಣದಲ್ಲಿಯೇ ನಡೆದಿದೆ ಎಂಬ ಮಾಹಿತಿ ಇದ್ದು, ವಸತಿ ನಿಲಯದ ಸಿಬ್ಬಂದಿಗಳ ನಿರ್ಲಕ್ಷ್ಯ ಮತ್ತು ಕಾರ್ಯವೈಖರಿ ಮೇಲೆ ತೀವ್ರ ಅನುಮಾನ ಹುಟ್ಟುಹಾಕಿದೆ.

ತಾಯಿ ಮತ್ತು ನವಜಾತ ಗಂಡು ಮಗುವನ್ನು ಕೊಪ್ಪಳದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಬಾಲಕಿ ಕುಕನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬ ಮಾಹಿತಿ ಇದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, 16 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು ಮತ್ತು ಹೆರಿಗೆಯಾಗಿದ್ದು ವಸತಿ ನಿಲಯದ ಸಿಬ್ಬಂದಿಗಳಿಗೆ ಏಕೆ ತಿಳಿದಿಲ್ಲ ಎಂಬ ಪ್ರಶ್ನೆ ಎದ್ದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಮಗುವಿಗೆ ಜನ್ಮ ನೀಡಿದ ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಗಂಭೀರ ಪರಿಗಣಿಸಿದ್ದು ವಸತಿ ನಿಲಯದ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿರುವ ಹಿನ್ನೆಲೆಯಲ್ಲಿ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಡಳಿತಕ್ಕೆ ಪತ್ರ ಬರೆದು ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಪ್ರಕರಣ ಕುರಿತು ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, ವಾರ್ಡನ್‌ ಅನ್ನು ಅಮಾನತ್ತುಗೊಳಿಸಲಾಗಿದೆ ಮತ್ತು ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Ads on article

Advertise in articles 1

advertising articles 2

Advertise under the article