ಮೈಸೂರು :ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪಕ್ಕೆ ಹೆದರಿ ನಾಲೆಗೆ ಹಾರಿ ಜೀವ ಕಳೆದುಕೊಂಡ ಯುವಕ..!!!

ಮೈಸೂರು :ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ, ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ.
ಸದ್ಯ ಆತನ, ಮೃತದೇಹ ಬೆಟ್ಟದ ತುಂಗಾ ನಾಲೆಯಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೂ ಮುನ್ನ ವಾಯ್ಸ್ ನೋಟ್ ಮಾಡಿಟ್ಟಿರುವ ಯುವಕ, ವಿದ್ಯಾರ್ಥಿನಿ ಗರ್ಭಿಣಿಯಾಗುವುದಕ್ಕೆ ನಾನು ಕಾರಣ ಅಲ್ಲ. ನನಗೂ ಆಕೆಗೂ ಯಾವುದೇ ಸಂಬಂಧ ಇಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇದರಿಂದಾಗಿ ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ, ವೈದ್ಯರು ಬಂದು ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಆಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಶಾಲೆಗೆ ಕಳಂಕ ಬರುತ್ತದೆ ಎಂದು ಅಂತ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.
ಹುಡುಗಿಯನ್ನು ಮಾತನಾಡಿಸಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಶಾಲೆಯ ಪಿಟಿ ಟೀಚರ್ ಇದಕ್ಕೆಲ್ಲಾ ಕಾರಣ. ಅವರು ಹೀಗೆ ಮಾಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಾಯ್ಸ್ ನೋಟ್ನಲ್ಲಿ ಯುವಕ ಹೇಳಿದ್ದಾನೆ.