ಬೆಂಗಳೂರು :ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ವಿದ್ಯಾರ್ಥಿನಿ ಆತ್ಮ*ಹತ್ಯೆ...!!

ಬೆಂಗಳೂರು: ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರುಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದೆ. ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ ಕೇಳಿಬಂದಿದೆ.
ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳು ಉಪನ್ಯಾಸನಕ ವಿರುದ್ಧ ಸಿಡಿದೆದಿದ್ದಾರೆ. ಕಾಲೇಜು ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಕಾರಣರಾದ ಉಪನ್ಯಾಸಕನ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿದ್ದಾರೆ.